10:17 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ; ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ

08/05/2023, 11:01

ಮಂಗಳೂರು (reporterkarnataka.com): ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 9 ಮತ್ತು ಮೇ 10 ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ ಅಥವಾ ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯøರ್ಥಿಗಳು ತಮ್ಮ ಚುನಾವಣಾ ಜಾಹೀರಾತನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಗೆ ನಿಗಧಿತ ಅನುಬಂಧ-ಸಿ ಅರ್ಜಿ ನಮೂನೆಯೊಂದಿಗೆ ಎರಡು ಸ್ವಯಂ ದೃಢೀಕೃತ ಜಾಹೀರಾತು ಪ್ರತಿಗಳನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ.

ಇನ್ನು ಚುನಾವಣಾ ಬಹಿರಂಗ ಪ್ರಚಾರ ಮೇ 8 ರಂದು ಸಂಜೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಎಂದಿನಂತೆ ಜಿಲ್ಲಾ ಎಂ.ಸಿ.ಎಂ.ಸಿ. ಸಮಿತಿಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ 8 ರ ಸಂಜೆ 5 ಗಂಟೆ ವರೆಗಿನ ಅವಧಿಗೆ ಮಾತ್ರ ಸುದ್ದಿ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಜಾಹೀರಾತು ಪ್ರಚಾರ ಪಡಿಸಲು ಸಮಿತಿಯಿಂದ ಪೂರ್ವಾನುಮತಿ ನೀಡಲಾಗುತ್ತದೆ.
ಇನ್ನು ಪತ್ರಿಕೆಗಳು ಮೇ 9 ಮತ್ತು 10ರಂದು ಯಾವುದೇ ಚುನಾವಣಾ ಜಾಹಿರಾತುಗಳನ್ನು ಪ್ರಕಟಿಸುವ ಮುನ್ನ ಎಂಸಿಎಂಸಿ ಸಮಿತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕವೇ ಜಾಹೀರಾತು ಪ್ರಕಟಿಸಬೇಕು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ.
ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರಗಳ ಮೇಲೆ ಚುನಾವಣ ಆಯೋಗ ತೀವ್ರ ನಿಗಾ ವಹಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು