3:44 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವಿಜಯಪುರ ಬಸವನ ಬಾಗೇವಾಡಿ: ಇವಿಎಂ, ವಿವಿ ಪ್ಯಾಟ್ ಧ್ವಂಸ; ಸುಮಾರು 25 ಮಂದಿ ಪೊಲೀಸ್ ವಶಕ್ಕೆ

10/05/2023, 19:26

ವಿಜಯಪುರ(reporterkarnataka.com): ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಅಧಿಕಾರಿಗಳು ಇವಿಎಂ ಬದಲಾಯಿಸುತ್ತಿದ್ದಾರೆ ಮತ್ತು ಮತದಾನ ಮುಗಿದಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲೆಕ್ಟ್ರಾನಿಕ್ ಮತಯಂತ್ರ, ವಿವಿ ಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಈ ಸಂಬಂಧ ಸುಮಾರು 25 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮತಗಟ್ಟೆ ಅಧಿಕಾರಿಗಳ ವಾಹನಗಳಿಗೆ ಉದ್ರಿಕ್ತರು ಹಾನಿ ಮಾಡಿದ್ದಾರೆ.
ಕಾರಿನಲ್ಲಿ
ಹೆಚ್ಚುವರಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಸಾಗಿಸುತ್ತಿದ್ದಾಗ ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ಉದ್ರಿಕ್ತ ಜನರು ಆಕ್ರೋಶಗೊಂಡು ಇವಿಎಂಗಳನ್ನು ಒಡೆದು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ 20-25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರದ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಇವರನ್ನು ಕರೆತಂದಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು