8:48 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ

11/05/2023, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆಯ ಮಾಜಿ‌ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ
ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ.
15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ಎಂದು ಶಂಕಿಸಲಾಗಿದೆ.
ತರೀಕೆರೆ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯ ತೋಟದ ಮನೆಯ ಬಾಗಿಲು ಮುರಿದು ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.1 ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಲೂಟಿ ಮಾಡಿದ್ದಾರೆ.
ಚುನಾವಣೆ ಸಮಯದಲ್ಲಿ ನಡೆದ ಈ ಘಟನೆ
ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿದ್ದಾರೆ.


ದುಷ್ಕರ್ಮಿಗಳ ಶೋಧಕ್ಕೆ ಬಲೆ ಬೀಸಲಾಗಿದೆ.
ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ? ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು