2:39 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ

17/07/2021, 14:53

ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಜೆ 6.30ರ ವೇಳೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರಧಾನಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಅಡ್ಡಿ ಪಡಿಸುತ್ತಿರುವ ಬಗ್ಗೆ ಮೋದಿ ಅವರ ಗಮನಕ್ಕೆ ತಂದರು ಎಂದು ತಿಳಿದು ಬಂದಿದೆ. ಮೇಕೆದಾಟು ಯೋಜನೆಯ ಶಂಕುಸ್ಥಾಪನೆಗೆ ಸ್ವತಃ ಪ್ರಧಾನಿಯನ್ನೇ ಮುಖ್ಯಮಂತ್ರಿ ಆಹ್ವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು