8:35 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ

17/07/2021, 14:53

ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಜೆ 6.30ರ ವೇಳೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರಧಾನಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಅಡ್ಡಿ ಪಡಿಸುತ್ತಿರುವ ಬಗ್ಗೆ ಮೋದಿ ಅವರ ಗಮನಕ್ಕೆ ತಂದರು ಎಂದು ತಿಳಿದು ಬಂದಿದೆ. ಮೇಕೆದಾಟು ಯೋಜನೆಯ ಶಂಕುಸ್ಥಾಪನೆಗೆ ಸ್ವತಃ ಪ್ರಧಾನಿಯನ್ನೇ ಮುಖ್ಯಮಂತ್ರಿ ಆಹ್ವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು