1:38 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ: ಮೇಕೆದಾಟು ಯೋಜನೆ ಪ್ರಸ್ತಾಪ, ತಮಿಳುನಾಡು ತಕರಾರು ಬಗ್ಗೆ ಆಕ್ಷೇಪ

17/07/2021, 14:53

ನವದೆಹಲಿ(reporterkarnataka news): ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಶುಕ್ರವಾರ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳು ವಿಶೇಷವಾಗಿ ಮೇಕೆದಾಟು ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಧಾನಿ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಂಜೆ 6.30ರ ವೇಳೆಗೆ ಸಮಯ ನಿಗದಿಪಡಿಸಲಾಗಿತ್ತು. ಪ್ರಧಾನಿ ಅವರನ್ನು ಭೇಟಿಯಾದ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಅಡ್ಡಿ ಪಡಿಸುತ್ತಿರುವ ಬಗ್ಗೆ ಮೋದಿ ಅವರ ಗಮನಕ್ಕೆ ತಂದರು ಎಂದು ತಿಳಿದು ಬಂದಿದೆ. ಮೇಕೆದಾಟು ಯೋಜನೆಯ ಶಂಕುಸ್ಥಾಪನೆಗೆ ಸ್ವತಃ ಪ್ರಧಾನಿಯನ್ನೇ ಮುಖ್ಯಮಂತ್ರಿ ಆಹ್ವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು