1:39 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೇ 14ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶರ ಪುರ ಪ್ರವೇಶ

11/05/2023, 20:22

ಮಂಗಳೂರು(reporterkarnataka.com): ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಮೇ 14ರಂದು ಸಂಜೆ 5.30 ಗಂಟೆಗೆ ತಮ್ಮ ಮೂಲ್ಕಿ ಮೊಕ್ಕಂನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.
ಪುರ ಪ್ರವೇಶ ಮೆರವಣಿಗೆಯು ವಿ.ಟಿ.ರಸ್ತೆಯ ಚೇತನ ಶಾಲೆಯಿಂದ ಸಂಜೆ 6.00 ಗಂಟೆಗೆ ಆರಂಭವಾಗಿ 7.30ಕ್ಕೆ ಕಾರ್ ಸ್ಟ್ರೀಟ್ ನ ಗೋಕರ್ಣ ಮಠ ತಲುಪಲಿದೆ. ಸಂಸ್ಥಾನದ ಮಠಾಧಿಪತಿಯಾದ ನಂತರ ಸ್ವಾಮೀಜಿಯವರು ಪ್ರಥಮ ಬಾರಿಗೆ ಮಂಗಳೂರಿನ ಕಾರ್ ಸ್ಟ್ರೀಟ್ ‌ನಲ್ಲಿರುವ ತಮ್ಮ ಸ್ವಮಠಕ್ಕೆ ಭೇಟಿ ನೀಡುತ್ತಿದ್ದಾರೆ. 2023 ರ ಮೇ 14 ರಿಂದ 21 ರವರೆಗೆ ಸ್ವಾಮೀಜಿಯವರ ಮೊಕ್ಕಾಂನಲ್ಲಿ ಹಲವಾರು ಧಾರ್ಮಿಕ ಆಚರಣೆಗಳು, ಹವನಗಳು, ಮುದ್ರಾಧಾರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು