2:10 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ: ಏಪ್ರಿಲ್ ತಿಂಗಳ ಟಾಪರ್ ಆಗಿ ಭೀಮಪ್ಪ ಬೇನಾಳ ಮತ್ತು ರಿಶಾ ಆಯ್ಕೆ

12/05/2023, 14:33

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಭೀಮಪ್ಪ ಬೇನಾಳ ಹಾಗೂ ರಿಶಾ ಆಯ್ಕೆಯಾಗಿದ್ದಾರೆ.


ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಢಾಣಕಶಿರೂರ ಗ್ರಾಮದ ಮಹೇಶ್ ಬೇನಾಳ ಹಾಗೂ ಚಂದ್ರಕಲಾ ಬೇನಾಳ ದಂಪತಿಯ ಪುತ್ರ ಭೀಮಪ್ಪ ಬೇನಾಳ. ಈತ ಬೆಂಗಳೂರಿನಲ್ಲಿ
2ನೇ ತರಗತಿ ವಿದ್ಯಾರ್ಥಿ. ಸಂಗೀತದಲ್ಲಿ ತುಂಬಾ ಆಸಕ್ತಿ ಹೊಂದಿದ್ದು, ಗುರುವಿಲ್ಲದೆ ಯೂಟ್ಯೂಬ್ ನೋಡಿಕೊಂಡು ತಂದೆಯ ಸಹಾಯದೊಂದಿಗೆ ಕೀಬೋರ್ಡ್ ನುಡಿಸುವುದು ಮತ್ತು ಹಾಡುವುದು ಕಲಿಯುತ್ತಿದ್ದಾನೆ. ಚಲನಚಿತ್ರ ಗೀತೆಗಳು, ಭಕ್ತಿಗೀತೆಗಳು, ದೇಶಭಕ್ತಿ ಗೀತೆಗಳು, ಜಾನಪದ ಗೀತೆಗಳು ಹಾಗೂ ದಾಸರ ಪದಗಳು ಮತ್ತು ವಚನಗಳನ್ನು, ಕೀಬೋರ್ಡ್ ನುಡಿಸುತ್ತಾ, ಹಾಡುತ್ತಾನೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಮತ್ತು ಗಣೇಶನ ಹಬ್ಬ ಹೀಗೆ ಹಲವಾರು ಕಾರ್ಯಕ್ರಮದ ವೇದಿಕೆಗಳಲ್ಲಿ ಹಾಡಿ ಪ್ರಶಸ್ತಿಗಳನ್ನು ಪಡೆದಿದ್ದಾನೆ. ಆನ್ ಲೈನ್ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾನೆ. ಚಿತ್ರಕಲೆ ಹಾಗೂ ಕರಾಟೆಯಲ್ಲಿ ಬಹುಮಾನಗಳು ಮತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾನೆ. ಪ್ರತೀ ದಿನ ವಾಯ್ಸ್ ಆಫ್ ಆರಾಧನದಲ್ಲಿ ಭಾಗವಹಿಸಿ ಅಕ್ಟೋಬರ್ ತಿಂಗಳು-2022 ಮತ್ತು ಏಪ್ರಿಲ್ ತಿಂಗಳು-2023 ವಿಜೇತರಾಗಿದ್ದಾನೆ.
ರಿಶಾ, ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಸುದರ್ಶನ್ ಕಾಂಚನ್ ಮತ್ತು ಅಶ್ವಿನಿ ದಂಪತಿಯ ಪುತ್ರಿ. 4 ವರ್ಷದ ಪುಟಾಣಿ ರಿಶಾ ಕುಂದಾಪುರ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಎಲ್ ಕೆಜಿ ಓದುತಿದ್ದಾಳೆ. ಈಕೆ ಸಂಗೀತ ಮತ್ತು ಡಾನ್ಸ್ ನಲ್ಲಿ ಆಸಕ್ತಿಯನ್ನು ಹೊಂದಿರುತ್ತಾಳೆ. ಈಕೆ ಸಂಸ್ಕೃತಿ ಸಿರಿ ನಡೆಸಿದ ಮುದ್ದುಕೃಷ್ಣ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ, ವಿಕೆ ಫರ್ನಿಚರ್ ನಡೆಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಹೆಲ್ಪಿoಗ್ ಹ್ಯಾಂಡ್ ಕುಂದಾಪುರ ಇವರು ನಡೆಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ನಿಧಿ ಕ್ರಿಯೇಷನ್ಸ್ ಪುತ್ತೂರು ನಡೆಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ಪಥಮ ಸ್ಥಾನ, ಅಕ್ಷರ ಕೋಚಿಂಗ್ ಸೆಂಟರ್ ನಡೆಸಿದ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅವರು ನಡೆಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಮತ್ತು ವಾಯ್ಸ್ ಆಫ್ ಆರಾಧನಾ ನಡೆಸಿದ ಮಕ್ಕಳ ದಿನಾಚರಣೆಯ ಫೋಟೋ ಸ್ಪರ್ಧೆಯಲಿ ಮೆಚ್ಚುಗೆ ಪಡೆದಿರುತ್ತಾರೆ. ನಿಧಿ ಕ್ರಿಯೇಷನ್ಸ್ ರವರ ಕ್ಯೂಟ್ ಬೇಬಿ ಫೋಟೋ ಸ್ಪರ್ಧೆಯಲ್ಲಿ ಮೆಚ್ಚುಗೆಯನ್ನು ಪಡೆದಿರುತ್ತಾರೆ. ಹೀಗೆ ಶಾಲೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾಳೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಡಿಸೆಂಬರ್ ಮತ್ತು ಏಪ್ರಿಲ್ ತಿಂಗಳ ವಿಜೇತೆ ಆಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು