12:50 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ

13/05/2023, 00:08

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ‌. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು.
ಸುರತ್ಕಲ್ ನ ಎನ್ ಐಟಿಕೆಯಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕೆ ಕಾರ್ಯ ಶುರುವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಕ್ಷೇತ್ರದ ಮತ ಎಣಿಕೆಗೆ ತಲಾ 19 ಟೇಬಲ್ ಗಳನ್ನು ಅಳವಡಿಸಲಾಗಿದೆ. 5 ಟೇಬಲ್ ಪೋಸ್ಟಲ್ ಮತ ಎಣಿಕೆಗೆ ಹಾಗೂ 14 ಟೇಬಲ್ ಇವಿಎಂ ಮತ ಎಣಿಕೆಗೆ ಅಳವಡಿಸಲಾಗಿದೆ. ಜಿಲ್ಲೆಯ 8 ಕ್ಷೇತ್ರಗಳಿಗೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆ ಕಾರ್ಯಕ್ಕೆ ಅಳವಡಿಸಲಾಗಿದೆ. ಪ್ರತಿ ಕ್ಷೇತ್ರದ 19 ಕೌಟಿಂಗ್ ಟೇಬಲ್ ಗಳಿಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ 19 ಸಿಸಿ ಕ್ಮಾಮೆರಾ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು