2:23 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ

13/05/2023, 00:08

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ‌. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು.
ಸುರತ್ಕಲ್ ನ ಎನ್ ಐಟಿಕೆಯಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕೆ ಕಾರ್ಯ ಶುರುವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಕ್ಷೇತ್ರದ ಮತ ಎಣಿಕೆಗೆ ತಲಾ 19 ಟೇಬಲ್ ಗಳನ್ನು ಅಳವಡಿಸಲಾಗಿದೆ. 5 ಟೇಬಲ್ ಪೋಸ್ಟಲ್ ಮತ ಎಣಿಕೆಗೆ ಹಾಗೂ 14 ಟೇಬಲ್ ಇವಿಎಂ ಮತ ಎಣಿಕೆಗೆ ಅಳವಡಿಸಲಾಗಿದೆ. ಜಿಲ್ಲೆಯ 8 ಕ್ಷೇತ್ರಗಳಿಗೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆ ಕಾರ್ಯಕ್ಕೆ ಅಳವಡಿಸಲಾಗಿದೆ. ಪ್ರತಿ ಕ್ಷೇತ್ರದ 19 ಕೌಟಿಂಗ್ ಟೇಬಲ್ ಗಳಿಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ 19 ಸಿಸಿ ಕ್ಮಾಮೆರಾ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು