11:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ

13/05/2023, 00:08

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ‌. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು.
ಸುರತ್ಕಲ್ ನ ಎನ್ ಐಟಿಕೆಯಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕೆ ಕಾರ್ಯ ಶುರುವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಕ್ಷೇತ್ರದ ಮತ ಎಣಿಕೆಗೆ ತಲಾ 19 ಟೇಬಲ್ ಗಳನ್ನು ಅಳವಡಿಸಲಾಗಿದೆ. 5 ಟೇಬಲ್ ಪೋಸ್ಟಲ್ ಮತ ಎಣಿಕೆಗೆ ಹಾಗೂ 14 ಟೇಬಲ್ ಇವಿಎಂ ಮತ ಎಣಿಕೆಗೆ ಅಳವಡಿಸಲಾಗಿದೆ. ಜಿಲ್ಲೆಯ 8 ಕ್ಷೇತ್ರಗಳಿಗೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆ ಕಾರ್ಯಕ್ಕೆ ಅಳವಡಿಸಲಾಗಿದೆ. ಪ್ರತಿ ಕ್ಷೇತ್ರದ 19 ಕೌಟಿಂಗ್ ಟೇಬಲ್ ಗಳಿಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ 19 ಸಿಸಿ ಕ್ಮಾಮೆರಾ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು