9:54 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸುರತ್ಕಲ್ ಎನ್ ಐಟಿಕೆ ಮತ ಎಣಿಕೆ ಕೇಂದ್ರ: ಪ್ರತಿ ಕ್ಷೇತ್ರಕ್ಕೆ 19 ಕೌಟಿಂಗ್ ಟೇಬಲ್, 19 ಸಿಸಿ ಕ್ಯಾಮೆರಾ ಅಳವಡಿಕೆ

13/05/2023, 00:08

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದ.ಕ‌. ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸುರತ್ಕಲ್ ಸಮೀಪದ ಎನ್ ಐಟಿಕೆಯಲ್ಲಿ ಮೇ 13ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ರವಿ ಕುಮಾರ್ ಹೇಳಿದರು.
ಸುರತ್ಕಲ್ ನ ಎನ್ ಐಟಿಕೆಯಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭವಾಗಲಿದೆ. 8.30ರಿಂದ ಇವಿಎಂ ಮತ ಎಣಿಕೆ ಕಾರ್ಯ ಶುರುವಾಗಲಿದೆ ಎಂದು ಅವರು ತಿಳಿಸಿದರು.
ಪ್ರತಿ ಕ್ಷೇತ್ರದ ಮತ ಎಣಿಕೆಗೆ ತಲಾ 19 ಟೇಬಲ್ ಗಳನ್ನು ಅಳವಡಿಸಲಾಗಿದೆ. 5 ಟೇಬಲ್ ಪೋಸ್ಟಲ್ ಮತ ಎಣಿಕೆಗೆ ಹಾಗೂ 14 ಟೇಬಲ್ ಇವಿಎಂ ಮತ ಎಣಿಕೆಗೆ ಅಳವಡಿಸಲಾಗಿದೆ. ಜಿಲ್ಲೆಯ 8 ಕ್ಷೇತ್ರಗಳಿಗೆ ಒಟ್ಟು 112 ಟೇಬಲ್ ಗಳನ್ನು ಮತ ಎಣಿಕೆ ಕಾರ್ಯಕ್ಕೆ ಅಳವಡಿಸಲಾಗಿದೆ. ಪ್ರತಿ ಕ್ಷೇತ್ರದ 19 ಕೌಟಿಂಗ್ ಟೇಬಲ್ ಗಳಿಗೆ ಚುನಾವಣಾ ಆಯೋಗದ ಸೂಚನೆ ಮೇರೆಗೆ 19 ಸಿಸಿ ಕ್ಮಾಮೆರಾ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು