ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆ: ಒಂದು ಸ್ಥಾನ ಕಳೆದುಕೊಂಡ ಬಿಜೆಪಿ, ಒಂದು ಸ್ಥಾನ ಗಳಿಸಿದ ಕಾಂಗ್ರೆಸ್
13/05/2023, 19:02

ಮಂಗಳೂರು(reporterkarnataka.com): ರಾಜ್ಯ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಜಿಲ್ಲೆಯಲ್ಲಿ ಬಿಜೆಪಿ
ಕಳೆದ ಚುನಾವಣೆಗೆ ಹೋಲಿಸಿದರೆ, ಒಂದು ಸ್ಥಾನ ಕಳೆದು ಕೊಂಡಿದೆ. ಹಾಗೆ ಕಾಂಗ್ರೆಸ್ ಒಂದು ಸ್ಥಾನ ಗಳಿಕೆ ಮಾಡಿದೆ.
ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ, ಬೆಳ್ತಂಗಡಿ ಹಾಗೂ ಸುಳ್ಯದಲ್ಲಿ ಬಿಜೆಪಿ ಮತ್ತೆ ಭರ್ಜರಿ ಗೆಲುವು ಸಾಧಿಸಿ. ಅದರೆ ಪುತ್ತೂರು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಸ್ಥಳೀಯ ಬಿಜೆಪಿಯೊಳಗಿನ ಆಂತರಿಕ ವೈರುಧ್ಯ ಬಿಜೆಪಿಯನ್ನು ಇಲ್ಲಿ ನೆಲಕಚ್ಚುವಂತೆ ಮಾಡಿದೆ. ಚುನಾವಣಾ ಸಮಯದಲ್ಲಿ ಬಿಜೆಪಿ ಪಾಳಯದಿಂದ ಕಾಂಗ್ರೆಸ್ ಗೆ ಜಿಗಿದ ಅಶೋಕ್ ಕುಮಾರ್ ರೈ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ವಿಧಾನಸಭೆ ಮೆಟ್ಟಿಲು ಏರುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಬಾಗೀರಥಿ ಮುರಳ್ಯ ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಉಳಿದಂತೆ ಮಂಗಳೂರು ಉತ್ತರದಿಂದ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣದಿಂದ ಡಿ. ವೇದವ್ಯಾಸ ಕಾಮತ್, ಬಂಟ್ವಾಳದಿಂದ ರಾಜೇಶ್ ನಾಯ್ಕ್, ಬೆಳ್ತಂಗಡಿಯಿಂದ ಹರೀಶ್ ಪೂಂಜ ಹಾಗೂ ಮೂಡಬಿದ್ರೆಯಿಂದ ಉಮಾನಾಥ ಕೋಟ್ಯಾನ್ ಅವರು ಎರಡನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ.