10:30 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮತ್ತೆ ಖದರ್!: ಎಸ್ ಡಿಪಿಐ ಜತೆಗಿನ ತಾಂಟುವ ಆಟದಲ್ಲಿ ಅಂತರ ಹೆಚ್ಚಿಸಿ ಗೆದ್ದ ಖಾದರ್!

13/05/2023, 22:37

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲರ ಲೆಕ್ಕಾಚಾರದಂತೆ ಮಂಗಳೂರು ಕ್ಷೇತ್ರದಿಂದ
ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಜತೆಗೆ ಗೆಲುವಿನ‌ ಅಂತರವನ್ನೂ ಹೆಚ್ಚಿಸಿಕೊಂಡಿದ್ದಾರೆ.
ಸತತ 5ನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಿರುವ ಖಾದರ್ ಅವರಿಗೆ ಈ ಬಾರಿ ಟಫ್ ಫೈಟ್ ಎದುರಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಲೆಕ್ಕಾಚಾರ ಹಾಕಿದ್ದರು. ಕಾರಣ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಪರಂಗಿಪೇಟೆ ಅವರು ತೊಡೆ ತಟ್ಟಿ ಖಾದರ್ ವಿರುದ್ಧ ಸ್ಪರ್ಧೆಗಿಳಿದಿದ್ದರು. ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿಂತ ಹೆಚ್ಚು ಖಾದರ್ ವಿರುದ್ಧ ಆರೋಪವನ್ನು ರಿಯಾಜ್ ಮಾಡಿದ್ದರು. ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಭ್ಯರ್ಥಿ ಗಳಾಗಿರುವುದರಿಂದ ಒಂದೇ ಸಮುದಾಯದೊಳಗಿನ ಜಗಳ ಮಾರನೇ ವ್ಯಕ್ತಿಗೆ ಸಹಾಯ ಮಾಡಿತು ಎಂದು ಜನರು ಅಂದುಕೊಂಡಿದ್ದರು. ಖಾದರ್- ರಿಯಾಜ್ ಫೈಟ್ ನಿಂದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಗೆ ನೆರವಾದೀತು ಎಂಬ ಲೆಕ್ಕಾಚಾರ ಕೇಳಿ ಬಂದಿತ್ತು. ಆದರೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಲೆಕ್ಕಾಚಾರವೆಲ್ಲ ತಲೆ ಕೆಳಗಾಗಿದೆ. ಎಸ್ ಡಿಪಿಐ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಮತ ಬಾಚಿಕೊಂಡರೂ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರಿಂದ 23 ಸಾವಿರ ಮತಗಳ ಅಂತರದಲ್ಲಿ ಖಾದರ್ ಗೆಲುವಿನ ನಗೆ ಹೊರಸೂಸಿದ್ದಾರೆ.




ಖಾದರ್ ಗೆಲುವಿನ ಓಟವನ್ನು ತಡೆಯಲು ಬಿಜೆಪಿ ಪಾಳಯದಲ್ಲಿ ಭಾರೀ ಕಾರ್ಯತಂತ್ರ ನಡೆಯಲಿದೆ ಎಂಬ ಮಾಹಿತಿ ಆರಂಭದಲ್ಲಿದ್ದರೂ ನಂತರ ಅದು ಠುಸ್ ಎನಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಬಹುತೇಕ ಕ್ಷೇತ್ರಗಳಿಗೆ ಕರೆಸಿ ರೋಡ್ ಶೋ ನಡೆಸಿದ್ದರೂ ಸತೀಶ್ ಕುಂಪಲ ಪರ ಯಾವುದೇ ಸ್ಟಾರ್ ಕ್ಯಾಂಪೇನರ್ ಗಳನ್ನು ಕರೆಸದೆ ಬಿಜೆಪಿ ಕೈಚೆಲ್ಲಿ ಕುಳಿತ್ತಿತ್ತು. ಒಂದು ರೀತಿಯಲ್ಲಿ ಬಿಜೆಪಿ ಇಲ್ಲಿ ಸತೀಶ್ ಕುಂಪಲ ಅವರನ್ನು ಬಲಿಪಶು ಮಾಡಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು