1:36 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿಯಾಗಿ ಆಯ್ಕೆ ವಿಷಯ ಹೈಕಮಾಂಡ್ ಅಂಗಳಕ್ಕೆ

14/05/2023, 21:08

ಬೆಂಗಳೂರು(reporterkarnataka.com): ಒಗ್ಗಟ್ಟಿನಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಇನ್ನು ಅಧಿಕಾರಕ್ಕಾಗಿ ಒಗ್ಗಟ್ಟು ಮುರಿಯುವುದು ಬೇಡ. ಬಣ ರಾಜಕೀಯ ಮಾಡುವುದು ಬೇಡ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಹೈಕಮಾಂಡಿಗೆ ಬಿಟ್ಟು ಬಿಡೋಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಆಯ್ಕೆ ಸಂಬಂಧಿ ಸಿದಂತೆ ಬೆಂಗಳೂರಿ ಖಾಸಗಿ ಹೊಟೇಲ್ ನಲ್ಲಿ ಭಾನುವಾರ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.
ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ನಡೆದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಕೊಡಬೇಕೆಂದು ಪಟ್ಟು ಹಿಡಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರದ ಚುಕ್ಕಾಣಿ ನೀಡುವಂತೆ ಒಕ್ಕಲಿಗರು ಹಕ್ಕೊತ್ತಾಯ ಮಾಡುತ್ತಿದ್ದಾರೆ. ಇವೆಲ್ಲದರ ನಡುವೆ ದಲಿತ ಸಿಎಂ ಕೂಗು ಕೂಡ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅಭ್ಯರ್ಥಿ ಆಯ್ಕೆ ಕಬ್ಬಿಣದ ಕಡಲೆಕಾಯಿ ಆಗಿ ಪರಿಣಮಿಸಿದೆ.

ನಾಯಕನಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆಗೊಳ್ಳುವ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಹಾದಿ ಸುಗಮವಾಗಿದೆ.
ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಆ ಮೂಲಕ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಯಾಗುವ ಅವಕಾಶ ಒದಗಿ ಬಂದಿದೆ. ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಸಾಧಿಸಿತ್ತು. ಆಡಳಿತರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾಗಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 5 ವರ್ಷ ಆಡಳಿತ ನಡೆಸಿದ ಅವರ ಕಾಂಗ್ರೆಸ್ ಪಕ್ಷ 2018ರ ಚುನಾವಣೆಯಲ್ಲಿ ಸೋಲು ಅನುಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು