7:48 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ

14/05/2023, 23:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ
ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಹೇಳಿದರು.
ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆದವರು. ಅವರಿಗೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರಬೇಕು.
ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು ಸರಿಯಲ್ಲ ಎಂದರು.
ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಅವರು ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು. ಯಾರನ್ನೋ ಮೆಚ್ವಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ.
ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು