9:41 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಸಿಬಿಎಸ್‌ಇ ಬೋರ್ಡ್ ಪರೀಕ್ಷೆ: ಕೆನರಾ ಹೈಸ್ಕೂಲ್ ಅತ್ಯುತ್ತಮ ಸಾಧನೆ

15/05/2023, 10:23

ಮಂಗಳೂರು(reporterlarnataka.com): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 2023 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಕೆನರಾ ಹೈ ಸ್ಕೂಲ್ (ಸಿಬಿಎಸ್ಇ ) ಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. 120 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣಗೊಂಡು 100% ಫಲಿತಾಂಶ ಬಂದಿದೆ. 117 ವಿದ್ಯಾರ್ಥಿಗಳು 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿದ್ದಾರೆ. 10 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸಾರಂಗ ರಾವ್ ಇನೊಳಿ(97%), ದಿಯಾ ಎನ್ ಕಾಮತ್(96.8%), ಜಾಹ್ನವಿ ಶೆಣೈ(96.6%), ವಾರುಣಿ ಸುರೇಶ್(96%), ಆರ್ಯನ್ ಎಂ(96%), ವಿ ಸಾಯಿ ವಿಜ್ವಲ್ ಕಾರ್ತಿಕ್(96%), ಸತ್ಯಪ್ರಸಾದ್ ಜಿ ಪೈ(95.8%), ಕೆ ಆಕಾಶ್ ಎಂ ರಾವ್(95.4%), ಕಾತ್ಯಾಯಿನಿ ಎಸ್ ಪೈ(95.4%), ತುಳಸಿ ಹರಿಪ್ರಸಾದ್ (95.4%) ಅಂಕಗಳನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. 24 ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು, 23 ವಿದ್ಯಾರ್ಥಿಗಳು 85%ಕ್ಕಿಂತ ಹೆಚ್ಚು, 60 ವಿದ್ಯಾರ್ಥಿಗಳು 60%ಕ್ಕಿಂತ ಹೆಚ್ಚು, ಹಾಗು 3 ವಿದ್ಯಾರ್ಥಿಗಳು 48% ಗಿಂತ ಹೆಚ್ಚು ಪಡೆದುಕೊಂಡಿದ್ದಾರೆ.2015 ರ ಈ ಸಂಸ್ಥೆಯ ಮೊದಲ ಬ್ಯಾಚ್ 100 ಶೇಕಡ ಫಲಿತಾಂಶ ಪಡೆದುಕೊಂಡಿದ್ದು ಅದರ ನಂತರ ಪ್ರತಿವರ್ಷ ಕೂಡ ಅತ್ಯುತ್ತಮ ಸಾಧನೆಯನ್ನು ಮಾಡುತ್ತಾ ಬಂದಿದೆ. ಈ ಸಾಧನೆಗೆ ವಿದ್ಯಾರ್ಥಿಗಳ ಶ್ರಮ, ಶಿಕ್ಷಕ ವರ್ಗದ ಪ್ರೋತ್ಸಾಹ, ಅತ್ಯುತ್ತಮ ಬೋಧನಾ ಕ್ರಮ, ಆಡಳಿತ ಮಂಡಳಿಯ ಸಹಕಾರ, ಪೋಷಕರ ಕಾಳಜಿ ಇವೆಲ್ಲವೂ ಕಾರಣವಾಗಿರುತ್ತದೆ. ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕವರ್ಗವನ್ನು ಕೆನರಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು