2:13 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ

15/05/2023, 22:36

ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ಎಮ್ಮೆ, ದನ ಸೇರಿದಂತೆ ಸಾಲು ಸಾಲು ಜಾನುವಾರುಗಳು ಹಳಿ ಮೇಲೆ ರೈಲಿಗೆ ಅಡ್ಡ ಬಂದ ಪರಿಣಾಮ ಈ ಘೋರ ದುರಂತ ನಡೆದಿದೆ.


ಲೋಕೊ ಪೈಲೆಟ್ ರೈಲಿನ ವೇಗ ನಿಯಂತ್ರಣ ಮಾಡಿ ರೈಲು ಹಳಿ ತಪ್ಪುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ಜಾನುವಾರುಗಳನ್ನು ನಿಯಂತ್ರಿಸದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸ್ಥಳೀಯರು ಹೇಳುತ್ತಾರೆ. ವಿಲೇವಾರಿಯಾಗದ ಜಾನುವಾರುಗಳ ಮೃತದೇಹ ಪರಿಸರದಲ್ಲಿ ದುರ್ನಾತ ಬೀರುತ್ತಿದೆ.
ನಗರಪಾಲಿಕೆ, ರೈಲ್ವೆ ಇಲಾಖೆ ನಿರ್ಲಕ್ಷ ವಿರೋಧಿಸಿ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಇನ್ಸ್ಪೆಕ್ಟರ್, ಸ್ಥಳೀಯ ಅಧಿಕಾರಿಗೆ ಘೆರಾವ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು