12:21 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ

15/05/2023, 22:36

ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ಎಮ್ಮೆ, ದನ ಸೇರಿದಂತೆ ಸಾಲು ಸಾಲು ಜಾನುವಾರುಗಳು ಹಳಿ ಮೇಲೆ ರೈಲಿಗೆ ಅಡ್ಡ ಬಂದ ಪರಿಣಾಮ ಈ ಘೋರ ದುರಂತ ನಡೆದಿದೆ.


ಲೋಕೊ ಪೈಲೆಟ್ ರೈಲಿನ ವೇಗ ನಿಯಂತ್ರಣ ಮಾಡಿ ರೈಲು ಹಳಿ ತಪ್ಪುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ಜಾನುವಾರುಗಳನ್ನು ನಿಯಂತ್ರಿಸದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸ್ಥಳೀಯರು ಹೇಳುತ್ತಾರೆ. ವಿಲೇವಾರಿಯಾಗದ ಜಾನುವಾರುಗಳ ಮೃತದೇಹ ಪರಿಸರದಲ್ಲಿ ದುರ್ನಾತ ಬೀರುತ್ತಿದೆ.
ನಗರಪಾಲಿಕೆ, ರೈಲ್ವೆ ಇಲಾಖೆ ನಿರ್ಲಕ್ಷ ವಿರೋಧಿಸಿ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಇನ್ಸ್ಪೆಕ್ಟರ್, ಸ್ಥಳೀಯ ಅಧಿಕಾರಿಗೆ ಘೆರಾವ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು