9:11 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ

15/05/2023, 22:36

ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ಎಮ್ಮೆ, ದನ ಸೇರಿದಂತೆ ಸಾಲು ಸಾಲು ಜಾನುವಾರುಗಳು ಹಳಿ ಮೇಲೆ ರೈಲಿಗೆ ಅಡ್ಡ ಬಂದ ಪರಿಣಾಮ ಈ ಘೋರ ದುರಂತ ನಡೆದಿದೆ.


ಲೋಕೊ ಪೈಲೆಟ್ ರೈಲಿನ ವೇಗ ನಿಯಂತ್ರಣ ಮಾಡಿ ರೈಲು ಹಳಿ ತಪ್ಪುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ಜಾನುವಾರುಗಳನ್ನು ನಿಯಂತ್ರಿಸದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸ್ಥಳೀಯರು ಹೇಳುತ್ತಾರೆ. ವಿಲೇವಾರಿಯಾಗದ ಜಾನುವಾರುಗಳ ಮೃತದೇಹ ಪರಿಸರದಲ್ಲಿ ದುರ್ನಾತ ಬೀರುತ್ತಿದೆ.
ನಗರಪಾಲಿಕೆ, ರೈಲ್ವೆ ಇಲಾಖೆ ನಿರ್ಲಕ್ಷ ವಿರೋಧಿಸಿ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಇನ್ಸ್ಪೆಕ್ಟರ್, ಸ್ಥಳೀಯ ಅಧಿಕಾರಿಗೆ ಘೆರಾವ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು