8:13 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸತತ 5ನೇ ಬಾರಿ ಗೆದ್ದಿರುವುದಕ್ಕೆ ಖಾದರ್ ಫುಲ್ ಖುಷ್: ರಾಜ್ಯದ ಜನತೆಯ ನೋವು ಓಟಿನ ಮೂಲಕ ವ್ಯಕ್ತವಾಗಿದೆ ಎಂದ ಮಿಸ್ಟರ್ ಕೂಲ್

16/05/2023, 16:28

ಮಂಗಳೂರು(reporterkarnataka.com): ಬಿಜೆಪಿ ಸರಕಾರದ 4 ವರ್ಷಗಳ ಆಡಳಿತ ಕಂಡ ಜನತೆ ತಮ್ಮ ನೋವನ್ನು ಓಟಿನ ಮೂಲಕ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿಗೆ ಕಾರಣವಾಯಿತು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು.
5ನೇ ಬಾರಿ ಗೆಲುವು ಸಾಧಿಸಿದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ, ದ್ವೇಷಪೂರಿತ ಆಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಗೆ ಅಭೂತಪೂರ್ವ ಜಯ ಸಿಕ್ಕಿದೆ ಎಂದರು.
ಬಿಜೆಪಿ ಸರಕಾರದ ತಾರತಮ್ಯ ದ, ದ್ವೇಷಪೂರಿತ, ಜನವಿರೋಧಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬೆಲೆಯೇರಿಕೆ, ಟ್ಯಾಕ್ಸ್, ಭ್ರಷ್ಟಾಚಾರದಿಂದ ತತ್ತರಿಸಿ ಹೋಗಿದ್ದಾರೆ. ಇದೆಲ್ಲ ಮತದಾನದ ಮೂಲಕ ವ್ಯಕ್ತವಾಗಿದೆ. ನಾನು ಕೂಡ ಮಂಗಳೂರು ಕ್ಷೇತ್ರದಲ್ಲಿ 5ನೇ ಬಾರಿ ಜಯಗಳಿಸಿದ್ದೇನೆ ಎಂದು ಅವರು ಖುಷಿ ಹಂಚಿಕೊಂಡರು.

ದ.ಕ. ಮತ್ತು ಉಡುಪಿ ಬಿಟ್ಟರೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಎಲ್ಲ ಕಡೆ ಕಾಂಗ್ರೆಸ್ ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ದ.ಕ. ಹಾಗೂ ಉಡುಪಿಯಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ 5 ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿ ಮುಂದಿನ ಚುನಾವಣೆ ಯಲ್ಲಿ ಕರಾವಳಿಯಲ್ಲೂ ಉತ್ತಮ ಸಾಧನೆ ಮಾಡಲಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು