10:15 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸರಕಾರಿ ಬಸ್ಸಿನಲ್ಲಿ ಹೆತ್ತಳಾ ತಾಯಿ!: ಹೆಣ್ಣು ಮಗುವಿಗೆ ಜನ್ಮ; ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕಿ

16/05/2023, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಹೆಣ್ಣು ಮಗುವಿನ ಜನ್ಮ ನೀಡಿದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗ ಮಧ್ಯೆ ಸಾರಿಗೆ ಬಸ್‌ನಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂಲದ ಗರ್ಭಿಣಿ ಮಹಿಳೆಗೆ ಬಸ್‌ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಚಾಲಕರು ಬಸ್ ನಿಲ್ಲಿಸಿದರು. ಬಸ್ ನಿರ್ವಾಹಕಿ ವಸಂತ ಹಾಗೂ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆ ಹಾಗೂ ಪ್ರಯಾಣಿಕರು ಸಹಕರಿಸಿದರು.ನಂತರ 108 ಅಂಬ್ಯಲೆನ್ಸ್‌ಗೆ ಪ್ರಯಾಣಿಕ ಸೋಮಶೇಖರ್ ಅವರು ಕರೆ ಮಾಡಿದರು.


ಅಂಬ್ಯುಲೆನ್ಸ್‌ನಲ್ಲಿ ತಾಯಿ ಮಗುವನ್ನು ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದರು.
ಕೆಎ-18 ಎಫ್-0865 ನಂಬರ್‌ನ ಸಾರಿಗೆ ಬಸ್
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು.
ಬಸ್‌ನ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಯಲದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು