5:53 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಹಾರಕ್ಕೆ ‘ಕೋಬ್ರಾ’ ಜಾರಿ

17/05/2023, 14:20

ಮಂಗಳೂರು(reporterlarnataka.com): ನಗರದ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಕೋಬ್ರಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟ್ರಾಫಿಕ್ ಜಾಮ್ ಉಂಟಾದ ಸ್ಥಳಕ್ಕೆ ಕ್ಷಿಪ್ರವಾಗಿ ತಲುಪಲು ಇದು ಪೊಲೀಸರಿಗೆ ಸಹಾಯವಾಗಲಿದೆ.


ಮಂಗಳೂರು ನಗರದಲ್ಲಿ ವಾಹನ ಸಂಚಾರದ ಒತ್ತಡ ಅತೀ ಹೆಚ್ಚಾಗಿದ್ದು, ಇತ್ತೀಚಿನ ದಿನಗಳಲಂತೂ ಸಂಚಾರ ಪೊಲೀಸರಿಗೆ ಸಂಚಾರ ನಿರ್ವಹಣೆ ಒಂದು ಸವಾಲಾಗಿ ಪರಿಣಮಿಸಿದೆ. ನಗರದಲ್ಲಿ ಸುಗಮ ಸಂಚಾರವನ್ನು ಜಾರಿ ಮಾಡಲು ಎಷ್ಟೇ ಆಧುನಿಕ ತಂತ್ರಜ್ಞಾನಗಳನ್ನು ಬಳಸಿದರೂ ಸಹ ಸಂಚಾರ ಪೊಲೀಸರ ಇರುವಿಕೆಯು ಅನಿವಾರ್ಯವಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ ಸಣ್ಣ ಪುಟ್ಟ ಅಪಘಾತ ಸಂಭವಿಸಿ ವಾಹನ ಸವಾರರುಗಳು ಜಗಳವಾಡಿಕೊಂಡ ಸಂದರ್ಭದಲ್ಲಿ ವಾಹನಗಳನ್ನು ರಸ್ತೆಯ ಮಧ್ಯದಲ್ಲಿಯೇ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಾರೆ ಹಾಗೂ ಇಂತಹ ಇತರೆ ಹಲವಾರು ಸಮಯಗಳಲ್ಲಿ ಆ ಸ್ಥಳಕ್ಕೆ ತುರ್ತಾಗಿ ಹೋಗಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕಾರಿಯಾಗುವಂತೆ ಮಂಗಳೂರು ನಗರದಲ್ಲಿ, ನಾಲ್ಕು ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಮೇ 16ರಂದು ಸಂಚಾರ ಪೂರ್ವ ಪೊಲೀಸ್ ಠಾಣೆ ಮತ್ತು ಸಂಚಾರ ಪಶ್ಚಿಮ ಪೊಲೀಸ್ ಠಾಣೆಗೆ ಉಪಯೋಗಿಸಿಕೊಂಡು ಸಂಚಾರ ಸುವ್ಯವಸ್ಥೆ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಸ್ತಾಂತರಿಸಲಾಗಿದೆ. ಈ ‘ಕೋಬ್ರಾ’ ದ್ವಿಚಕ್ರ ವಾಹನಗಳನ್ನು ಠಾಣಾ ಸರಹದ್ದಿನಲ್ಲಿ ನೊಂದವರಿಗೆ ಸಹಕರಿಸಲು ಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು