10:04 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು