5:23 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು