4:44 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಭಾರೀ ಗಾಳಿ- ಮಳೆ: ಯುವತಿ ಸಾವು; ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

21/05/2023, 19:07

ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ.
ಬಿರುಗಾಳಿ ಮಳೆಗೆ ತೀವ್ರ ಅಸ್ವಸ್ಥರಾದ ಆಂಧ್ರ ಪ್ರದೇಶ ಮೂಲದ ಭಾನುಲೇಖಾ ಅವರನ್ನು ನಗರದ ಸೈಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ವಿಳಂಬವಾಗಿ ಯುವತಿ ಸಾವನ್ನಪ್ಪಿದರು ಎನ್ನಲಾಗಿದೆ. ಭಾನುರೇಖಾ ಅವರು ಇನ್ಫೋಸಿಸ್ ಉದ್ಯೋಗಿಯಾಗಿದ್ದಾರೆ. ಅವಘಡ ನಡೆದ ಸ್ಥಳ ಹಾಗೂ ಸೈಂಟ್ ಮಾರ್ಥಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಾಡಿಗೆ ವಾಹನ ಪಡೆದು ಭಾನುರೇಖಾ ಸಹಿತ 7 ಮಂದಿ ಬೆಂಗಳೂರು ನಗರ ನೋಡಲು ಬಂದಿದ್ದರು. ಮಳೆಯ ಅಂದಾಜು ಇಲ್ಲದ ಚಾಲಕ ಅಂಡರ್ ಪಾಸ್ ಒಳಗೆ ಪ್ರವೇಶಿಸಿದ್ದ. ಮಳೆ ನೀರಿನ ಒತ್ತಡದಿಂದ ಕಾರಿನ ಗಾಜು ತೆರೆದುಕೊಳ್ಳಲಿಲ್ಲ. ಭಾನುರೇಖಾ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಉಳಿದ 6 ಮಂದಿ ಸುರಕ್ಷಿತರಾಗಿದ್ದಾರೆ ಎಂದರು.
ಮೃತ ಯುವತಿ ಕುಟುಂಬಕ್ಕೆ ಮುಖ್ಯಮಂತ್ರಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು