7:59 PM Tuesday30 - April 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಗಳ ಕಾಟ:  ಜಾತಿ ಸರ್ಟಿಫಿಕೇಟಿಗೂ ನಿಲ್ಲಬೇಕಿಲ್ಲ 3 ದಿನ ಕ್ಯೂನಲ್ಲಿ !!

18/07/2021, 10:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಸೌಹಾರ್ದ ಸೌಧದಲ್ಲಿರುವ ತಹಶೀಲ್ದಾರ್ (ತಃಸಿಲ್) ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಕಾಟ ವಿಪರೀತವಾಗಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಕಾಲದಲ್ಲಿ ನಡೆಯದ ಕಾರಣ ಜನರು ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ. ಬ್ರೋಕರ್ ಗಳು ಜನರಿಂದ ವಿಪರೀತ ಹಣ ದೋಚುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ.

ಬ್ರೋಕರ್ ಗಳು ಪ್ರತಿಯೊಂದು ಕೆಲಸಕ್ಕೂ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಜನರಿಗೆ ತಮ್ಮ ದಿನದ ದುಡಿಮೆ ಬಿಟ್ಟು ದಿನಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅರ್ಜಿಗಳು ಹಾಕುವುದು ಕಷ್ಟವಾದಾಗ ಮಧ್ಯವರ್ತಿಗಳ ಮೊರೆ ಹೋಗುತ್ತಾರೆ. ಆಗ ಬ್ರೋಕರ್ ಗಳು ದುಪ್ಪಟ್ಟು ಹಣ ವಸೂಲಿ ಮಾಡಿ ರಾತ್ರಿ ಹೊತ್ತಿನಲ್ಲಿ ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತದೆ.

ಜಾತಿ ಆದಾಯ ಸರ್ಟಿಫಿಕೇಟ್ ಗಾಗಿ ಮೂರು ದಿನಗಳ ಕಾಲ ಕೆಲಸ ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾಗುತ್ತದೆ. ಯಾಕೆಂದರೆ ಸರ್ವರ್  ಸರಿ ಇಲ್ಲ ಎಂಬ ಉತ್ತರ ಕಂಪ್ಯೂಟರ್ ಆಪರೇಟರ್ ಗಳಿಂದ ಬರುತ್ತದೆ. ಇಲ್ಲಿನ ಹೊಸ ತಹಶೀಲ್ದಾರ್ ವಿಜಯಲಕ್ಷ್ಮೀ ಅವರಿಗೆ ಇಲ್ಲಿನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲ.

ಒಟ್ಟಿನಲ್ಲಿ ಸಾರ್ವಜನಿಕರ ಪರಿಸ್ಥಿತಿ  ಹೇಳತೀರದು.ಇಷ್ಟೇ ಅಲ್ಲದೆ ತಹಶೀಲ್ದಾರ್ ಕಚೇರಿಯ ಕೆಲಸಕ್ಕಾಗಿ ಸಾರ್ವಜನಿಕರು ಕೋವಿಡ್ ಮರೆತು ಒಬ್ಬರಿನ್ನೊಬ್ಬರು ಅಂಟಿಕೊಂಡು ನಿಲ್ಲುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ಸಾಲುಗಳನ್ನು ಮಾಡಿ  ಅವಕಾಶ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು