3:45 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು