3:50 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು