7:51 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು