6:40 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ನಿಷ್ಠರಿಗೆ ಸಚಿವ ಸ್ಥಾನ: ದಿಲ್ಲಿಯಲ್ಲಿ ವರಿಷ್ಠರ ಮುಂದೆ ಸಿದ್ದು-ಡಿಕೆಶಿ ಲಾಬಿ; ಪೇಚಿಗೆ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್

25/05/2023, 18:56

ಮೃದುಲಾ ನಾಯರ್ ಹೊಸದಿಲ್ಲಿ

info.reporterkarnataka@gmail.com

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಿಂದ ದೆಹಲಿಯಲ್ಲಿ ಭೀಡುಬಿಟ್ಟಿದ್ದು, ವರಿಷ್ಠರ ಜತೆ ಒಂದರ ಮೇಲೊಂದು ಸಭೆ ನಡೆಯುತ್ತಲೇ ಇದೆ. ತಮ್ಮ ಆಪ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನ ನೀಡಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ಜಿದ್ದಿಗೆ ಸಿಎಂ ಮತ್ತು ಡಿಸಿಎಂ ಬಿದ್ದಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.

ಬೆಂಗಳೂರಿನಲ್ಲಿ ಬುಧವಾರ ಸ್ಪೀಕರ್ ಆಯ್ಕೆ ನಡೆದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ಒಂದೇ ವಿಮಾನದಲ್ಲಿ ದಿಲ್ಲಿಗೆ ಹೋಗಿದ್ದರು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮುನ್ನ ಬುಧವಾರ ರಾತ್ರಿಯೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡುವಂತೆ ಲಾಬಿ ನಡೆಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.
ಸಿದ್ದರಾಮಯ್ಯ ಭೇಟಿಗೂ ಮೊದಲೇ ಶಿವಕುಮಾರ್ ಮತ್ತು ಅವರ ತಮ್ಮ ಸಂಸದ ಡಿ.ಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ರಾತ್ರಿಯೊಳಗೆ ನೂತನ ಸಚಿವರ ಪಟ್ಟಿ ಸಿದ್ದವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು