4:34 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಪತ್ತೆ: ಪೊಲೀಸ್ – ಅರಣ್ಯ ಇಲಾಖೆ ಜಂಟೀ ಕಾರ್ಯಾಚರಣೆ ಯಶಸ್ವಿ

29/05/2023, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟ್ರಕ್ಕಿಂಗ್ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದ್ದು, ಆ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಸ್ಥಳೀಯರು ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಶೋಧ ಕಾರ್ಯ ನಡೆಸಿತ್ತು.
ಭಾನುವಾರ ಸಂಜೆ ರಾಣಿ ಝರಿ ಪಾಲ್ಸ್ ಹೋಗಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ ಬೆಂಗಳೂರಿನ ಜೆ.ಪಿ. ನಗರದ ಪರೋಸ್ ಅಗರ್ ವಾಲ್ ನಾಪತ್ತೆಯಾಗಿದ್ದರು. ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯ ಸಹಾಯದಿಂದ ಶೋಧ ಕಾರ್ಯ ನಡೆಸಿತ್ತು. ಇದೀಗ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಚಾರ್ಮಾಡಿಯ ಘಾಟಿಯ ಅರಣ್ಯದಲ್ಲಿ ಪತ್ತೆ ಹಚ್ಚಲಾಗಿದೆ.


ಪತ್ತೆಯಾದ ಪರೋಸ್ ಅಗರ್ ವಾಲ್ ಅವರನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು