1:40 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬಸ್ ನಿಲುಗಡೆಗೆ ಆಗ್ರಹಿಸಿ ಕಾಗವಾಡ- ವಿಜಯಪುರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ: 4 ತಾಸು ಸಂಚಾರ ತಡೆ

29/05/2023, 17:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಖೋತ ಕ್ರಾಸ್ ಮೂಲಕ ಸಂಚರಿಸುವ ಎಲ್ಲ ಘಟಕದ ಬಸ್‌ಗಳನ್ನು ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಕಾಗವಾಡ-ವಿಜಯಪುರ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಸುಮಾರು 4 ಗಂಟೆ ಕಾಲ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರ ಸಂತೋಷ ಕದಂ ಮಾತನಾಡಿ, ಖೋತನಟ್ಟಿ ಕ್ರಾಸ್ ನಲ್ಲಿ ಬಸ್‌ ನಿಲ್ಲಿಸದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ ಮೇ 10ರಂದು ನಡೆದ ವಿಧಾನಸಭೆ ಚುನಾವಣೆ ಬಹಿಷ್ಕರಿಸುವ ಕುರಿತು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದಾಗ ಎರಡು ಬಾರಿ ಆಗಮಿಸಿ ಸಂಧಾನ ಸಭೆ ನಡೆಸಿ ಕೆಎಸ್‌ಆ‌ರ್ ಟಿಸಿ ಅಧಿಕಾರಿಗಳು ಹಾಗೂ ತಹಸೀಲ್ದಾರರು ಬಸ್‌ ನಿಲ್ಲಿಸುವ ಆದೇಶ ಹೊರಡಿಸಿದ್ದರಿಂದ ಮತದಾನ ಮಾಡಿದ್ದೇವೆ.

ಇದೀಗ ಅಥಣಿ, ಚಿಕ್ಕೋಡಿ ಮತ್ತು ಬೆಳಗಾವಿ ಘಟಕದ ಬಸ್‌ಗಳು ಮಾತ್ರ ನಿಲ್ಲುತ್ತಿವೆ. ವಿಜಯಪುರ ಘಟಕದ ಬಸ್ ನಿಲ್ಲಿಸುವಂತೆ ವಿಜಯಪುರ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರೊಂದಿಗೆ ದೂರವಾಣಿ ಕರೆ ಮೂಲಕ ವಿಷಯ ತಿಳಿಸಿ ಮನವರಿಕೆ ಮಾಡಿದಾಗ ನಾಳೆಯಿಂದಲೇ ಬಸ್ ನಿಲುಗಡೆಗೊಳಿಸಲಾಗುವುದು ಹಾಗೂ ಕಂಟ್ರೋಲ್‌ರನ್ನು ನಿಯೋಜಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು