2:33 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಳೆಗಾಲದ ಸಂಭಾವ್ಯ ಅಪಾಯ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ

30/05/2023, 19:03

ಬಂಟ್ವಾಳ(reporterkarnataka.com): ಮುಂಬರುವ ಮಳೆಗಾಲದ ಸಂದರ್ಭ ಸಂಭಾವ್ಯ ಅಪಾಯಗಳನ್ನು ಎದುರಿಸಲು ಪೂರ್ವತಯಾರಿ ನಡೆಸಿ ಸನ್ನದ್ದರಾಗವಂತೆ ಹಾಗೂ ಮಳೆ ಬರುವವರೆಗೆ ಕುಡಿಯುವ ನೀರಿನ ಸಮಸ್ಯೆಗಳೂ ತಲೆದೋರದಂತೆ ನೋಡಿಕೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕುಡಿಯುವ ನೀರಿಗೆ ತೊಂದರೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸಿದರು.
ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳು, ಗ್ರಾಪಂ ಅಧ್ಯಕ್ಷರು ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ
ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿದರು.
ಅಧಿಕಾರಿಗಳು ದೂರವಾಣಿ ಸ್ವಿಚ್ ಆಫ್ ಮಾಡದೆ, ಸದಾ ಜನರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದರು.
ಹಾರಿಕೆಯ ಉತ್ತರ ನೀಡಿದ ಕೆಲ ಅಧಿಕಾರಿಗಳನ್ನು ಶಾಸಕರು
ತರಾಟೆಗೆ ತೆಗೆದುಕೊಂಡರು. ಮೇಲಧಿಕಾರಿಗಳ ಜೊತೆ ಮಾತನಾಡಿದರು.
ತಹಸೀಲ್ದಾರ್ ಎಸ್.ಬಿ.ಕೂಡಲಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ ಶಾಸಕರು, ಮಳೆಗಾಲಕ್ಕೂ ಮುನ್ನ ದುರಸ್ತಿಗೊಳಿಸಬೇಕಾದ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡಗಳು, ಅಪಾಯದ ಸ್ಥಿತಿಯಲ್ಲಿರುವ ಗುಡ್ಡಗಳು, ಹೆದ್ದಾರಿ, ಹೂಳೆತ್ತದ ಚರಂಡಿ, ಸಮಸ್ಯೆ ಉಂಟಾಗುವ ಸನ್ನಿವೇಶಗಳನ್ನು ನಿಭಾಯಿಸುವ ಕುರಿತು ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿಗೆ ತೊಂದರೆ ಮಾಡಿದವರ ವಿರುದ್ಧ ಕ್ರಮ:
ಮಳೆ ಬರುವವರೆಗೂ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿ, ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಮೂಲಕವಾದರೂ ನೀರು ಪೂರೈಸಿ ಎಂದ ಶಾಸಕರು, ಪುಚ್ಚೇರಿ ಡ್ಯಾಂ ನಲ್ಲಿ ನೀರು ಖಾಲಿ ಮಾಡಿ ಸಂಗಬೆಟ್ಟು ಸಹಿತ ಸುತ್ತಮುತ್ತಲಿನ ಜನರ ಕುಡಿಯುವ ನೀರಿಗೆ ತೊಂದರೆ ಉಂಟುಮಾಡಿದವರು ಯಾರು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕುಡಿಯುವ ನೀರಿಗೆ ತೊಂದರೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಎಂದು ಹೇಳಿದ ಶಾಸಕರು, ಯಾವುದೇ ಹಂತದಲ್ಲೂ ಸಮಸ್ಯೆ ಉದ್ಭವವಾಗಬಾರದು ಎಂದರು.
ಸಜಿಪ ಏತ ನೀರಾವರಿ ಯೋಜನೆಗೆ ಮೆಸ್ಕಾಂನಿಂದ ನೀರು ಪೂರೈಕೆ ನಿಲ್ಲಿಸಲಾಗಿದೆ ಎಂಬ ದೂರಿನ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಎಂ.ಡಿ. ಅವರ ಜೊತೆ ಶಾಸಕರು ಮಾತನಾಡಿ ಸೂಚನೆ ನೀಡಿದರು.
ಈ ಸಂದರ್ಭ ವಿವರ ನೀಡಿದ ಬಿಇಒ ಮತ್ತು ಸಿಡಿಪಿಒಗಳು, 40 ಅಂಗನವಾಡಿ ಕೇಂದ್ರಗಳು ಮತ್ತು 64 ಶಾಲೆಗಳಲ್ಲಿ ಈಗಿದ್ದ ಸ್ಥಿತಿ ಮುಂದುವರಿದರೆ, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದು ಎಂಬ ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಅಂಗನವಾಡಿ ಶಾಲೆಗಳನ್ನು ಪುನಾರಂಭಗೊಳ್ಳುವುದನ್ನು ಮುಂದಕ್ಕೆ ಹಾಕಬಹುದೇ ಎಂಬ ಕುರಿತು ಮಾತನಾಡುವುದಾಗಿ ತಿಳಿಸಿದರು.

ಕ್ರಮ ಕೈಗೊಳ್ಳಿ:
ಇದೇ ಸಂದರ್ಭ, ಕೆಆರ್ ಡಿಎಲ್ ನವರು 22 ಶಾಲೆಗಳಲ್ಲಿ ಮಳೆ ಹಾನಿ ಕೆಲಸ ಮಾಡಿಲ್ಲ ಎಂದು ಬಿಇಒ ಹೇಳಿದರೆ, 12 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಸಿಡಿಪಿಒ ಮಾಹಿತಿ ನೀಡಿದರು. ಇವುಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲು ಶಾಸಕರು ಸೂಚನೆ ನೀಡಿದರು. ಉಪ್ಪುಗುಡ್ಡೆ ನೀರಿನ ಟ್ಯಾಂಕ್ ಮತ್ತೆ ಮಳೆಗಾಲದಲ್ಲಿ ಬೀಳುವ ಸಾಧ್ಯತೆಯನ್ನು ವಿಎ ಗಮನಕ್ಕೆ ತಂದರು. ಪಾಣೆಮಂಗಳೂರು ಮಿಲಿಟರಿ ಗ್ರೌಂಡ್ ಹಾಗೂ ಇಲ್ಲಿನ ತಗ್ಗು ಪ್ರದೇಶಗಳಲ್ಲಿ ನೆರೆ ಪ್ರತಿ ವರ್ಷವೂ ಬರುತ್ತದೆ, ಆದರೆ ಇಲ್ಲಿರುವ ಸಣ್ಣ ತೋಡುಗಳ ಬದಿಯಲ್ಲಿರುವ ಗಿಡಗಂಟಿಗಳು, ಪೊದೆಗಳನ್ನು ಕಡಿದು ಬಳಿಕ ಹೂಳೆತ್ತುವ ಕಾರ್ಯವನ್ನು ಪುರಸಭಾ ಇಲಾಖೆಯವರು ಮಾಡಬೇಕು ಎಂದು ಶಾಸಕರು ಸೂಚಿಸಿದರು.ಈ ಸಂದರ್ಭ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಗಮನಕ್ಕೆ ತಂದರು. ಗ್ರಾಮೀಣ ಭಾಗದಲ್ಲಿ ರಸ್ತೆ ಬದಿಯಲ್ಲಿ ರಸ್ತೆ ಕೆಟ್ಟು ಹೋಗುವ ರೀತಿಯಲ್ಲಿ ಅಗೆದು ಕೇಬಲ್ ವಯರ್ ಗಳನ್ನು ಹಾಕಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು