12:58 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾರ್ಮಿಕ ಚಳುವಳಿಯ ಮಹಾನ್ ಶಕ್ತಿ ಸಿಐಟಿಯುಗೆ 53ರ ಸಂಭ್ರಮ: ಮಂಗಳೂರಿನಲ್ಲಿ ಸಂಸ್ಥಾಪಕರ ದಿನಾಚರಣೆ

30/05/2023, 20:52

ಮಂಗಳೂರು(reporterkarnataka.com): ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ, ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಮಂಗಳವಾರ ನಗರದ ಬೋಳಾರದಲ್ಲಿರುವ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣದ ಮೂಲಕ ಸಿಐಟಿಯು ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣಗೈದ ಸಿಐಟಿಯು ದ. ಕ. ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಅವರು ಮಾತನಾಡಿ, ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ಬೆಳೆದು ಬಂದ ಕಾರ್ಮಿಕ ಚಳುವಳಿಯ ಭಾಗವಾಗಿ ಹುಟ್ಟಿಕೊಂಡ ಸಿಐಟಿಯು ಕಳೆದ 53 ವರ್ಷಗಳಲ್ಲಿ ಧೀರೋದಾತ್ತವಾದ ಹೋರಾಟಗಳನ್ನು ನಡೆಸಿ ದೇಶದ ಕಾರ್ಮಿಕ ವರ್ಗವನ್ನು ಒಂದಾಗಿ ಸೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಆಳುವ ವರ್ಗಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಿ ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಾಪಾಡಲು ಕಟಿಬದ್ದ ಹೋರಾಡುತ್ತಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ಕಾರ್ಮಿಕ ವರ್ಗದ ಪಾತ್ರ ಪ್ರಧಾನವಾಗಿದ್ದು,ಇಂದಿಗೂ ದೇಶದ ಅಭಿವೃದ್ಧಿಯಲ್ಲಿ ಹಾಗೂ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವಲ್ಲಿ ದೊಡ್ಡ ಕೊಡುಗೆ ನೀಡಿದೆ.ಇಂತಹ ಕಾರ್ಮಿಕ ವರ್ಗವನ್ನು ವರ್ಗ ಸಂಘರ್ಷದ ದಾರಿಯಲ್ಲಿ ಮುನ್ನಡೆಸಿ ಸಮಾಜದ ಬದಲಾವಣೆಗಾಗಿ ಸಿಐಟಿಯು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ*ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೋಗರು, ಭಾರತಿ ಬೋಳಾರ,ನಾಗೇಶ್ ಕೋಟ್ಯಾನ್, ವಿಧ್ಯಾರ್ಥಿ ನಾಯಕರಾದ ಮಾಧುರಿ ಬೋಳಾರ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಧ್ವಜಾರೋಹಣ ನಡೆಸಬೇಕೆಂಬ ತೀರ್ಮಾನದ ಮೇರೆಗೆ ತೊಕ್ಕೊಟ್ಟು,ಕುತ್ತಾರ್,ಹರೇಕಳ,ಜಪ್ಪಿನಮೋಗರು, ಬಜಾಲ್ ಪಕ್ಕಲಡ್ಕ, ಉರ್ವಸ್ಟೋರ್, ಬಂದರು ಬೈತದಕ್ಕೆ, ಬೆಂಗರೆ, ಕೈಕಂಬ,ಕುಪ್ಪೆಪದವು, ವಾಮಂಜೂರು,ಮೂಡಬಿದ್ರಿ, ಬೆಳ್ತಂಗಡಿ,ಸುಳ್ಯ,ಬಂಟ್ವಾಳ ಮುಂತಾದ ಕಡೆಗಳಲ್ಲಿ ಧ್ವಜಾರೋಹಣ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು