11:53 AM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದ ಉರಗತಜ್ಞ ನರೇಶ್: ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಿದ್ದರು ಅವರು!

31/05/2023, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉರಗತಜ್ಞ ಸಾವು ಸ್ನೇಕ್ ನರೇಶ್ (51) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಈ ಘಟನೆ ನಡೆದಿದೆ.
ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದ ನರೇಶ್ ಅವರಿಗೆ ಮತ್ತೊಂದು ಹಾವು ಹಿಡಿಯಲು ಮಧ್ಯಾಹ್ನ ಕರೆ ಬಂದಿತ್ತು.


ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ಕೂಡಲೇ ನಾಗರಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನರೇಶ್ ಸಾವನ್ನಪ್ಪಿದ್ದಾರೆ.
ಸ್ಕೂಟಿ ಡಿಕ್ಕಿಯಲ್ಲಿ ಇದ್ದದ್ದು ಎರಡೇ ಹಾವು.
ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳಿದ್ದವು.
ಕಾರಿನ ಸೀಟ್, ಡಿಕ್ಕಿಯಲ್ಲಿ 20ಕ್ಕೂ ಹೆಚ್ಚು ಚೀಲಗಳಲ್ಲಿ ಹಾವು ಇರುತ್ತಿದ್ದವು. 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಕಾಡಿನೊಳಗೆ ಹಾವುಗಳನ್ನ ಬಿಟ್ಟು ನರೇಶ್ ಬರುತ್ತಿದ್ದರು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಅವರು ಖ್ಯಾತಿ ಪಡೆದಿದ್ದರು. ಸಾವಿರಾರು ಹಾವುಗಳನ್ನ ಅವರು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಕಾಡಿನೊಳಗೆ ಬಿಡುತ್ತಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. 2013ರಲ್ಲಿ ವಿಧಾನಸಭಾ ಚುನಾವಣೆಗೆ ನರೇಶ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು