5:41 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಎನ್ ಐಎ ದಾಳಿ: ಪುತ್ತೂರು ಕಾರ್ಯಾಚರಣೆಯಲ್ಲಿ 4 ಮಂದಿ ವಶಕ್ಕೆ?

31/05/2023, 12:11

ಮಂಗಳೂರು(reporterkarnataka.com): ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಬುಧವಾರ ಮುಂಜಾನೆ ದಾಳಿ ನಡೆಸಿದ್ದು, 4 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರಿನ ಕುಂಬ್ರ ಸೇರಿದಂತೆ 3 ಕಡೆಗಳಿಗೆ ಎನ್ ಐಎ ತಂಡ ಇಂದು ಮುಂಜಾನೆ 5 ಗಂಟೆಯ ವೇಳೆಗೆ ದಾಳಿ ನಡೆಸಿದ್ದು, ಒಟ್ಟು 4 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ನಿಟ್ಟಿನಲ್ಲಿ ಹವಾಲಾ ಮೂಲಕ ಹಣ ವರ್ಗಾವಣೆಯಾಗಿದೆ. ಕ್ರಿಪ್ಟೋ ಕರೆನ್ಸಿ ಮೂಲಕವೂ ಹಣ ಕೈಬದಲಾಗಿದೆ ಎನ್ನಲಾಗಿದೆ.
ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ.
ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳಿ ನಡೆಸಲಾಗಿದೆ. ಬಂಟ್ವಾಳ, ವಿಟ್ಲ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ 16 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು