10:41 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಎನ್ ಐಎ ದಾಳಿ: ಪುತ್ತೂರು ಕಾರ್ಯಾಚರಣೆಯಲ್ಲಿ 4 ಮಂದಿ ವಶಕ್ಕೆ?

31/05/2023, 12:11

ಮಂಗಳೂರು(reporterkarnataka.com): ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ಸುಮಾರು 16 ಕಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಬುಧವಾರ ಮುಂಜಾನೆ ದಾಳಿ ನಡೆಸಿದ್ದು, 4 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರಿನ ಕುಂಬ್ರ ಸೇರಿದಂತೆ 3 ಕಡೆಗಳಿಗೆ ಎನ್ ಐಎ ತಂಡ ಇಂದು ಮುಂಜಾನೆ 5 ಗಂಟೆಯ ವೇಳೆಗೆ ದಾಳಿ ನಡೆಸಿದ್ದು, ಒಟ್ಟು 4 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ನಿಟ್ಟಿನಲ್ಲಿ ಹವಾಲಾ ಮೂಲಕ ಹಣ ವರ್ಗಾವಣೆಯಾಗಿದೆ. ಕ್ರಿಪ್ಟೋ ಕರೆನ್ಸಿ ಮೂಲಕವೂ ಹಣ ಕೈಬದಲಾಗಿದೆ ಎನ್ನಲಾಗಿದೆ.
ಬುಧವಾರ ಬೆಳ್ಳಂಬೆಳಗೆ ನಡೆದ ಈ ದಾಳಿಯಲ್ಲಿ ಮನೆ, ಕಚೇರಿ ಕೂಡ ಸೇರಿದೆ.
ವಿಧ್ವಂಸಕ ಕೃತ್ಯ, ಹವಾಲಾ ಹಣ ಸೇರಿದಂತೆ ಹಲವು ವಿಷಯಗಳ ಕುರಿತು ತನಿಖೆ ನಡೆಸಲು ದಾಳಿ ನಡೆಸಲಾಗಿದೆ. ಬಂಟ್ವಾಳ, ವಿಟ್ಲ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ 16 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು