11:08 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು