4:15 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು