6:00 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ

01/06/2023, 22:26

ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆ ಮಂಗಳೂರು ವಿಶ್ವ ವಿದ್ಯಾ ನಿಲಯದ ರವೀಂದ್ರನಾಥ ಕಲಾಭವನದಲ್ಲಿ ಗುರುವಾರ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಸಮಾರಂಭ ನಡೆಯಿತು.


ಈ ಸಮಾರಂಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಗೆ ಅಭಿನಂದನೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಅಧ್ಯಕ್ಷ ತೆಯಲ್ಲಿ,ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ ಶಾಂತಾರಾಮ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರದಾನ
ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು