2:45 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ

01/06/2023, 22:26

ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆ ಮಂಗಳೂರು ವಿಶ್ವ ವಿದ್ಯಾ ನಿಲಯದ ರವೀಂದ್ರನಾಥ ಕಲಾಭವನದಲ್ಲಿ ಗುರುವಾರ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಸಮಾರಂಭ ನಡೆಯಿತು.


ಈ ಸಮಾರಂಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಗೆ ಅಭಿನಂದನೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಅಧ್ಯಕ್ಷ ತೆಯಲ್ಲಿ,ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ ಶಾಂತಾರಾಮ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರದಾನ
ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು