7:54 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ

01/06/2023, 23:09

ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು