8:56 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು