11:03 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು