5:24 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: 4 ಮಂದಿ ಖಾಕಿ ವಶಕ್ಕೆ

02/06/2023, 16:12

ಮಂಗಳೂರು(reporterkarnataka.com): ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಖಡಕ್ ಸೂಚನೆಯ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿ ನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು, ಈ ಸಂಬಂಧ 4 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ವಿದ್ಯಾರ್ಥಿ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು
ವಿದ್ಯಾರ್ಥಿ ನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ತೆರಳಿದ್ದಾರೆ. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು