1:54 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು