9:28 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ

02/06/2023, 16:23

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ‌ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ.
ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕದಲ್ಲಿ ರಾಜ್ಯದ ಪ್ರಮುಖ ನಾಯಕರುಗಳಲ್ಲಿ ಒಬ್ಬರಾಗಿದ್ದರು. ಜನಸಂಘ ಮೂಲದಿಂದ ರಾಜಕೀಯ ಪ್ರವೇಶಿಸಿದ ಸುಬ್ಬಯ್ಯ ಅವರು ಅಂದು ಆಡಳಿತ ಪಕ್ಷದ ರೋಲೆಕ್ಸ್ ವಾಚ್ ಹಗರಣದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಿದ್ದರು.
ಜನಸಂಘ ಹಾಗೂ ಬಿಜೆಪಿಯಲ್ಲಿ ಗರ್ಭಗುಡಿ ಸಂಸ್ಕೃತಿ ಇದೆ ಎಂದು ಆರೋಪಿಸಿ ಪಕ್ಷದಿಂದ ಹೊರಗೆ ಬಂದು ತನ್ನದೇ ಆದ ಕನ್ನಡ ನಾಡು ಪಕ್ಷ ಕಟ್ಟಿದ್ದರು. ಬಿಜೆಪಿ ಹಾಗೂ ಸಂಘ ಪರಿವಾರದ ಕಟು ಟೀಕೆಕಾರರಾಗಿದ್ದರು. ನೇರ ನಡೆ ನುಡಿಗೆ ಸುಬ್ಬಯ್ಯ ಅವರು ಖ್ಯಾತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು