8:07 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ

18/07/2021, 20:47

ಮಂಗಳೂರು(reporterkarnataka news): ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ.

ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಪ್ರತಿದಿನ ಸಂಚಾರ ಮಾಡುವವರ ಅನುಕೂಲಕ್ಕಾಗಿ ಈ ಅನುಮತಿ ನೀಡಲಾಗಿದೆ  ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನೆಲ್ಲ ಷರತ್ತು?

* ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ

ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,

* ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು