5:01 PM Friday9 - May 2025
ಬ್ರೇಕಿಂಗ್ ನ್ಯೂಸ್
J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ

ಇತ್ತೀಚಿನ ಸುದ್ದಿ

ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು; ಎಲ್ಲರೂ ಚಿಕ್ಕಮಗಳೂರಿನ ಕಳಸ ತಾಲೂಕಿನವರು!!

03/06/2023, 17:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿಯ ಲಿಂಕ್ ನಲ್ಲಿ ಕಾಣುವ ಗ್ರೂಪ್ ಫೋಟೋ ಹಾಗೂ ಸುದ್ದಿಯ ಒಳಗಡೆ ಇರುವ ಗ್ರೂಪ್ ಫೋಟೋಗಳಲ್ಲಿ ಇರುವವರೆಲ್ಲ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ಸೇರಿದವರು. ಇವರೆಲ್ಲ ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಅದೃಷ್ಟವಶಾತ್ ಇವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಂಗಸರು, ಮಕ್ಕಳು, ವೃದ್ಧರು ಸೇರಿದಂತೆ ಒಟ್ಟು 110 ಮಂದಿ ಕನ್ನಡಿಗರು ಇದ್ದರು.
ಇವರೆಲ್ಲ ಬೆಂಗಳೂರಿನಿಂದ ದುರಂತಕ್ಕೀಡಾದ ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಾಯಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಸ್ಥಳಾಂತರಗೊಂಡಿದ್ದರು. ಹಾಗಾಗಿ ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.


ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು